ಪಂಪನ ಆದಿಪುರಾಣ

ಆದಿಪುರಾಣವು ೧೦ನೇ ಶತಮಾನದ (ಕ್ರಿ.ಶ. ೯೪೨) ಕನ್ನಡದ ಆದಿಕವಿ ಪಂಪನು ರಚಿಸಿರುವ ಕೃತಿ. ಇದು ಜೈನ ಧರ್ಮದ ಮೊದಲ ತೀರ್ಥಂಕರನಾದ ವೃಷಭನಾಥನ ಜೀವನದ ಕಥೆ. ಇದು ಚಂಪೂಕಾವ್ಯವಾಗಿದ್ದು ಇದರಲ್ಲಿ ೧೬ ಆಶ್ವಾಸಗಳಿವೆ.
ಮೊದಲನೆಯ ೬ ಆಶ್ವಾಸಗಳು -ಪುರದೇವನ ಹಿಂದಿನ ಒಂಬತ್ತು ಜನ್ಮಗಳ ಬಗ್ಗೆ ಹೇಳುತ್ತವೆ. ೭ರಿಂದ ೧೦ನೇ ಆಶ್ವಾಸಗಳು-ಪುರದೇವನ ಜನನ,ಬಾಲ್ಯದ ಜೀವನದ ಬಗ್ಗೆ, ತಪಸ್ಸು, ಸಮವಸರಣದ ಬಗ್ಗೆ ಹೇಳುತ್ತವೆ. ೧೧ ರಿಂದ ೧೬ನೇ ಆಶ್ವಾಸವರಗೆ ಭರತ ಚಕ್ರವರ್ತಿಯ ಕಥೆಯನ್ನು ವಿವರಿಸುತ್ತದೆ. ಈ ಕಥೆಗಳಲ್ಲಿ ನೀಳಾಂಜನೆ ಎಂಬ ನರ್ತಕಿಯ ಕಥೆಯು ರೋಮಾಂಚನ ಮೂಡಿಸುತ್ತದೆ. ಮತ್ತು ಭರತ ಚಕ್ರವರ್ತಿ ಮತ್ತು ತಮ್ಮನಾದ ಬಾಹುಬಲಿಯ ಪ್ರಸಂಗ ಅತ್ಯಂತ ವಾಸ್ತವಿಕತೆಯಿಂದ ಕೂಡಿದೆ. ತನ್ನ ಅಣ್ಣನ ರಾಜ್ಯದ ಆಸೆಯನ್ನು ಕಂಡು ಬಾಹುಬಲಿಯ ಸಂನ್ಯಾಸತ್ವ ನಮ್ಮ ಈಗಿನ ಅಪ್ರಾಮಾಣಿಕರಿಗೆ ಒಂದು ಸಂದೇಶವಾಗಿದೆ.
ಪಂಪನ ತಂದೆ ಪೂರ್ವಿಕರಿಂದ ಬಂದ ವೈದಿಕ ಧರ್ಮವನ್ನು ಬಿಟ್ಟುಕೊಟ್ಟು ಜೈನಧರ್ಮಕ್ಕೆ ಮತಾಂತರ ಹೊಂದಿದವನು. ಜೈನ ಧರ್ಮಕ್ಕೆ ಸೇರಿದ ಪಂಪನಿಗೆ, ತಾನು ಆ ಧರ್ಮವನ್ನು ಕುರಿತು, ಆ ಧರ್ಮದ ಮಹಾವ್ಯಕ್ತಿಗಳನ್ನು ಕುರಿತು ಕಾವ್ಯ ಬರೆಯಬೇಕು ಎನ್ನಿಸಿತು. ಅದಕ್ಕಾಗಿ ಅವನು “ಆದಿಪುರಾಣ” ಎಂಬ ಕಾವ್ಯವನ್ನು ಬರೆದ. “ಆದಿಪುರಾಣ” ಜೈನರ ಮೊಟ್ಟಮೊದಲ ತೀರ್ಥಂಕರನಾದ ಆದಿದೇವ ಅಥವಾ ಪುರುದೇವನನ್ನುಸ ಕುರಿತದ್ದು. ಜೈನರ ಪ್ರಕಾರ ಇಪ್ಪತ್ನಾಲ್ಕು ಜನ ತೀರ್ಥಂಕರರು. ತೀರ್ಥಂಕರರು ಎಂದರೆ ಮುಕ್ತಿಯನ್ನು ಪಡೆದು ಪವಿತ್ರರಾದವರು. ಅವರಲ್ಲಿ ಮೊದಲನೆಯ ತೀರ್ಥಂಕರ ಆದಿದೇವ ಅಥವಾ ಪುರುದೇವ. ಈ ಆದಿದೇವನ ಕತೆಯೇ “ಆದಿಪುರಾಣ”ದ ಕತೆ.
ಮನುಷ್ಯನ ಮನಸ್ಸು, ಈ ಲೋಕದ ಸುಖ-ಸಂಪತ್ತುಗಳನ್ನು ಬಿಟ್ಟು ವೈರಾಗ್ಯದ ಹಾದಿಯನ್ನು ಹಿಡಿದರೆ ಯಾವ ನಲುವಿಗೆ ಏರುವುದೆಂಬುದನ್ನು ಪಂಪ “ಆದುಪುರಾಣ”ದಲ್ಲಿ ಚಿತ್ರಿಸಿದ್ದಾನೆ. ಆದಿದೇವ ಅನೇಕ ಜನ್ಮಗಳಲ್ಲಿ ತೊಳಲಿ, ಪಾಪಗಳನ್ನು ಕಳೆದುಕೊಂಡು, ತೊಳಲಿಕೊಂಡು, ಗುರುವಿನ ಉಪದೇಶದಿಂದ ಸಾಧನೆ ಮಾಡುತ್ತಾ, ಕಡೆಗೆ ತೀರ್ಥಂಕರನಾಗುತ್ತಾನೆ.

ಪುರದೇವನ ಒಂಬತ್ತು ಜನ್ಮಗಳು

  • ಮಹಾಬಲ
  • ಲಲಿತಾಂಗ
  • ವಜ್ರಜಂಘ
  • ಶ್ರೀಧರ ದೇವ
  • ಕೇಶವ
  • ಅಚ್ಯುತೇಂದ್ರ
  • ವಜ್ರನಾಭಿ
  • ಅಹಮಿಂದ್ರ ದೇವ
  • ವೃಷಭ ನಾಥ (ವೃಷಭ ದೇವ) (ಆದಿದೇವ)
  • Theertankara 10Feb2008.jpg

 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಶ್ರೀಮತಿ ನೇಮಿಚಂದ್ರ ರ ಪರಿಚಯ

ಭಾಷಾ ಕೌಶಲಗಳು

ಸು.ರಂ. ಎಕ್ಕುಂಡಿ ಕವಿ ಪರಿಚಯ